ಕುರ್ಆನ್ ಮತ್ತು ಸುನ್ನತ್ತಿನಿಂದ ಏನಾದರೂ ಜ್ಞಾನವನ್ನು ತಲುಪಿಸಿಕೊಡಬೇಕೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ಆದೇಶಿಸುತ್ತಿದ್ದಾರೆ. ಅದು ಒಂದೇ ಒಂದು ಸೂಕ್ತಿ ಅಥವಾ ಹದೀಸ್ ಆಗಿದ್ದರೂ ಪರವಾಗಿಲ್ಲ. ಆದರೆ ತಾನು ತಲುಪಿಸುವ ಆ ಸೂಕ್ತಿ ಅಥವಾ ಹದೀಸಿನ ಬಗ್ಗೆ ಸ್ಪಷ್ಟ ಜ್ಞಾನವಿರಬೇಕಾದ ಅಗತ್ಯವಿದೆ. ನಂತರ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬನೂ ಇಸ್ರಾಯೀಲರಿಂದ , ಅವರಿಗೆ ಸಂಭವಿಸಿದ ಕೆಲವು ಘಟನೆಗಳನ್ನು, ಅವು ನಮ್ಮ ಧರ್ಮಸಂಹಿತೆಗೆ (ಶರಿಯತ್) ವಿರುದ್ಧವಾಗಿರದಿದ್ದರೆ ಉಲ್ಲೇಖಿಸುವುದರಲ್ಲಿ ತೊಂದರೆಯಿಲ್ಲವೆಂದು ವಿವರಿಸಿದ್ದಾರೆ. ನಂತರ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಹೆಸರಲ್ಲಿ ಸುಳ್ಳು ಹೇಳುವುದರ ಬಗ್ಗೆ ಎಚ್ಚರಿಸಿದ್ದಾರೆ. ಅವರ ಬಗ್ಗೆ ಯಾರಾದರೂ ಉದ್ದೇಶಪೂರ್ವಕ ಸುಳ್ಳು ಹೇಳಿದರೆ, ಅವನು ನರಕದಲ್ಲಿ ತನ್ನ ಆಸನವನ್ನು, ಅಂದರೆ ಅವನ ವಾಸಸ್ಥಳವನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾನೆ.