ಅಲ್ಲಾಹು ಅಲ್ಲದವರ ಹೆಸರಿನಲ್ಲಿ ಅಥವಾ ಅವರ ಗುಣಲಕ್ಷಣಗಳನ್ನು ಹೇಳಿ ಯಾರಾದರೂ ಆಣೆ ಮಾಡಿದರೆ ಅವನು ಸತ್ಯನಿಷೇಧಿಯಾದನು ಅಥವಾ ಬಹುದೇವವಿಶ್ವಾಸಿಯಾದನು ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುತ್ತಿದ್ದಾರೆ ಏಕೆಂದರೆ, ಒಬ್ಬರ ಮೇಲೆ ನಾವು ಆಣೆ ಮಾಡಬೇಕಾದರೆ ನಾವು ಅವರ ಬಗ್ಗೆ ಅತಿಯಾದ ಗೌರವಭಾವವನ್ನು ಹೊಂದಿರುತ್ತೇವೆ. ಆದರೆ ಅತಿಯಾದ ಗೌರವ ಭಾವ ಇರಬೇಕಾದದು ಅಲ್ಲಾಹನಲ್ಲಿ ಮಾತ್ರ. ಆದ್ದರಿಂದ ಅಲ್ಲಾಹನ ಮೇಲೆ, ಅಥವಾ ಅವನ ಹೆಸರು ಮತ್ತು ಗುಣಲಕ್ಷಣಗಳ ಮೇಲೆ ಮಾತ್ರ ಆಣೆ ಮಾಡತಕ್ಕದ್ದು. ಅಲ್ಲಾಹು ಅಲ್ಲದವರ ಮೇಲೆ ಆಣೆ ಮಾಡುವುದು ಸಣ್ಣ ಶಿರ್ಕ್ (ಬಹುದೇವತ್ವ) ಆಗಿದೆ. ಆದರೆ ಆಣೆ ಮಾಡುವವನು ಅಲ್ಲಾಹನಿಗೆ ಗೌರವ ತೋರುವಂತೆ ಅಥವಾ ಅದಕ್ಕಿಂತಲೂ ಹೆಚ್ಚು ಗೌರವವನ್ನು ತಾನು ಆಣೆ ಮಾಡುವ ವಸ್ತುವಿಗೆ ತೋರಿದರೆ, ಆಗ ಅದು ದೊಡ್ಡ ಶಿರ್ಕ್ (ಬಹುದೇವತ್ವ) ಆಗುತ್ತದೆ.