ಪುನರುತ್ಥಾನ ದಿನ ಜನರ ಪೈಕಿ ತನ್ನ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯರಿಲ್ಲ, ಅಂದರೆ ಅಲ್ಲಾಹನ ಹೊರತು ಯಾವುದೇ ಸತ್ಯ ಆರಾಧ್ಯರಿಲ್ಲ ಎಂದು ತನ್ನ ಹೃದಯದಿಂದ ನಿಷ್ಕಳಂಕವಾಗಿ ಹೇಳಿದವನು ಮತ್ತು ಬಹುದೇವಾರಾಧನೆ ಹಾಗೂ ತೋರಿಕೆಯಿಂದ ಮುಕ್ತನಾಗಿರುವವನು ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುತ್ತಿದ್ದಾರೆ