“ತೀವ್ರವಾದಿಗಳು ನಾಶವಾದರು

ಅಬ್ದುಲ್ಲಾ ಬಿನ್ ಮಸ್‍ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ತೀವ್ರವಾದಿಗಳು ನಾಶವಾದರು.” ಅವರು ಇದನ್ನು ಮೂರು ಸಲ ಹೇಳಿದರು.
Sahih/Authentic. - Muslim

ಧಾರ್ಮಿಕ ಮತ್ತು ಲೌಕಿಕ ವಿಷಯಗಳಲ್ಲಿ ಹಾಗೂ ಮಾತು ಮತ್ತು ಕೆಲಸಗಳಲ್ಲಿ, ಯಾವುದೇ ಮಾರ್ಗದರ್ಶನ ಅಥವಾ ಜ್ಞಾನವಿಲ್ಲದೆ ಅತಿರೇಕಕ್ಕೆ ಹೋಗುವವರು ಮತ್ತು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಕಲಿಸಿದ ಧಾರ್ಮಿಕ ಎಲ್ಲೆಯನ್ನು ಮೀರುವವರಿಗೆ ಉಂಟಾಗುವ ನಾಶ-ನಷ್ಟಗಳ ಬಗ್ಗೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ರವರು ತಿಳಿಸುತ್ತಿದ್ದಾರೆ

  1. ಎಲ್ಲಾ ವಿಷಯಗಳಲ್ಲೂ ಹದ್ದುಮೀರುವುದನ್ನು ಮತ್ತು ಶಕ್ತಿಮೀರಿ ಹೊರೆ ಹೊರುವುದನ್ನು ನಿಷೇಧಿಸಲಾಗಿದೆ, ಎಲ್ಲಾ ವಿಷಯಗಳಲ್ಲೂ—ವಿಶೇಷವಾಗಿ ಆರಾಧನೆಯ ವಿಷಯದಲ್ಲಿ ಮತ್ತು ಸಜ್ಜನರನ್ನು ಗೌರವಿಸುವ ವಿಷಯದಲ್ಲಿ—ಇವುಗಳನ್ನು ತೊರೆಯಬೇಕೆಂದು ಈ ಹದೀಸ್ ತಿಳಿಸುತ್ತದೆ.
  2. ಆರಾಧನಾ ವಿಷಯಗಳಲ್ಲಿ ಪರಿಪೂರ್ಣತೆಯನ್ನು ಪಡೆಯಲು ಬಯಸುವುದು ಉತ್ತಮ ಕಾರ್ಯವಾಗಿದ್ದರೂ, ಅದು ಧರ್ಮಸಂಹಿತೆಗೆ ಅನುಗುಣವಾಗಿರಬೇಕೆಂದು ಈ ಹದೀಸ್ ತಿಳಿಸುತ್ತದೆ.
  3. ಪ್ರಮುಖ ವಿಷಯಗಳನ್ನು ಒತ್ತಿ ಹೇಳುವುದು ಅಪೇಕ್ಷಣೀಯವೆಂದು ಈ ಹದೀಸ್ ತಿಳಿಸುತ್ತದೆ. ಏಕೆಂದರೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಈ ವಾಕ್ಯವನ್ನು ಮೂರು ಸಲ ಪುನರಾವರ್ತಿಸಿದರು.
  4. ಇಸ್ಲಾಂ ಧರ್ಮದ ಸಹಿಷ್ಣುತೆ ಮತ್ತು ಸರಳತೆಯನ್ನು ಈ ಹದೀಸ್ ತಿಳಿಸುತ್ತದೆ.

ಯಶಸ್ವಿಯಾಗಿ ರವಾನಿಸಲಾಗಿದೆ!