ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ಸಾಲಗಾರನಿಗೆ ಸಾಲ ಮರುಪಾವತಿ ಮಾಡಲು ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಸಿಗುವ ಪ್ರತಿಫಲವು: ಪುನರುತ್ಥಾನ ದಿನದಂದು ಅಲ್ಲಾಹು ಅವನಿಗೆ ತನ್ನ ಸಿಂಹಾಸನದ ನೆರಳಿನಲ್ಲಿ ನೆರಳು ನೀಡುತ್ತಾನೆ. ಅಂದು ಸೂರ್ಯನು ಜನರ ತಲೆಯ ಹತ್ತಿರದಲ್ಲಿದ್ದು ಅದರ ಶಾಖವು ಬಹಳ ಕಠೋರವಾಗಿರುತ್ತದೆ. ಅಂದು ಅಲ್ಲಾಹು ನೀಡಿದ ನೆರಳಿನ ಹೊರತು ಬೇರೆ ಯಾವುದೇ ನೆರಳೂ ಇರುವುದಿಲ್ಲ.