ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಅವರ ಸಮುದಾಯಕ್ಕೆ ಸೇರಿದ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವರ ಹೊರತು! ಆಗ ಸಂಗಡಿಗರು (ಅಲ್ಲಾಹು ಅವರೆಲ್ಲರ ಬಗ್ಗೆ ಸಂಪ್ರೀತನಾಗಲಿ) ಕೇಳುತ್ತಾರೆ: "ಓ ಅಲ್ಲಾಹನ ಸಂದೇಶವಾಹಕರೇ! ನಿರಾಕರಿಸುವವರು ಯಾರು?!" ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸುತ್ತಾ ಹೇಳುತ್ತಾರೆ: "ಯಾರು ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆಜ್ಞಾಪಾಲನೆ ಮಾಡುತ್ತಾನೋ ಮತ್ತು ಅನುಸರಿಸುತ್ತಾನೋ ಅವನು ಸ್ವರ್ಗಕ್ಕೆ ಹೋಗುತ್ತಾನೆ; ಆದರೆ, ಯಾರು ಅವರ ಆಜ್ಞಾಪಾಲನೆ ಮಾಡುವುದಿಲ್ಲವೋ ಮತ್ತು ಧರ್ಮನಿಯಮಗಳನ್ನು ಅನುಸರಿಸುವುದಿಲ್ಲವೋ ಅವನು ತನ್ನ ದುಷ್ಕರ್ಮಗಳ ನಿಮಿತ್ತ ಸ್ವರ್ಗಕ್ಕೆ ಹೋಗಲು ನಿರಾಕರಿಸಿದ್ದಾನೆ."