ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ಪಾಪಗಳು, ಬಹುದೇವರಾಧನೆ, ಜನರಿಗೆ ಅವರ ಹಕ್ಕುಗಳನ್ನು ನೀಡದೆ ಅನ್ಯಾಯವೆಸಗುವುದು ಮುಂತಾದವುಗಳಲ್ಲಿ ನಿರತರಾಗಿರುವರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಅಂತಹ ಅಕ್ರಮಿಗಳಿಗೆ ಸರ್ವಶಕ್ತನಾದ ಅಲ್ಲಾಹು ಅವರ ಆಯುಷ್ಯ ಮತ್ತು ಆಸ್ತಿಯಲ್ಲಿ ಇನ್ನಷ್ಟು ಹೆಚ್ಚಿಸಿ ಕೊಡುತ್ತಾನೆ, ಅವರಿಗೆ ಶಿಕ್ಷೆ ನೀಡಲು ಅವನು ಆತುರ ಪಡುವುದಿಲ್ಲ. ಅವರೇನಾದರೂ ತಮ್ಮ ತಪ್ಪುಗಳನ್ನು ಒಪ್ಪಿ ಪಶ್ಚಾತಾಪ ಪಡದಿದ್ದರೆ ಅವನು ಅವರನ್ನು ಹಿಡಿದು ಶಿಕ್ಷಿಸುತ್ತಾನೆ. ಅವರ ಅನ್ಯಾಯಗಳ ಹೆಚ್ಚಳದಿಂದಾಗಿ ಅವನು ಅವರನ್ನು ಶಿಕ್ಷಿಸದೆ ಬಿಟ್ಟು ಬಿಡುವುದಿಲ್ಲ. ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು: "ಅಕ್ರಮವೆಸಗುತ್ತಿರುವ ಊರುಗಳನ್ನು ಹಿಡಿಯುವಾಗ ತಮ್ಮ ಪರಿಪಾಲಕನ (ಅಲ್ಲಾಹನ) ಹಿಡಿತವು ಹೀಗೆಯೇ ಆಗಿರುತ್ತದೆ. ನಿಶ್ಚಯವಾಗಿಯೂ ಅವನ ಹಿಡಿತವು ವೇದನಾಭರಿತ ಮತ್ತು ಕಠೋರವಾಗಿದೆ." [ಸೂರ ಹೂದ್: 102]