ಇಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಸಂಗಡಿಗರಿಗೆ (ಸಹಾಬಿಗಳಿಗೆ) ಆದೇಶಿಸುವುದೇನೆಂದರೆ, ಯಾವುದೇ ಪ್ರತಿಮೆಯನ್ನು — ಅಂದರೆ ಆತ್ಮವಿರುವ ಜೀವಿಯ ಮೂರ್ತ ಅಥವಾ ಅಮೂರ್ತ ರೂಪ — ತೊಲಗಿಸದೆ ಅಥವಾ ಅಳಿಸಿಹಾಕದೆ ಬಿಡಬಾರದು. ಅದೇ ರೀತಿ, ಎತ್ತರಿಸಿ ಕಟ್ಟಲಾಗಿರುವ ಸಮಾಧಿಯನ್ನು ನೆಲಸಮಗೊಳಿಸದೆ ಮತ್ತು ಅದರ ಮೇಲೆ ಕಟ್ಟಲಾಗಿರುವುದನ್ನು ದ್ವಂಸಗೊಳಿಸದೆ ಬಿಡಬಾರದು; ಅಥವಾ ಸಮಾಧಿಯು ಭೂಮಿಯಿಂದ ಒಂದು ಗೇಣು ಮಾತ್ರ ಎತ್ತರವಾಗಿರುವಂತೆ ಮಾಡಬೇಕು.