ಭವಿಷ್ಯದಲ್ಲಿ ನಡೆಯುವ ಸಂಗತಿಗಳನ್ನು ಹೇಳುವವರ ಬಗ್ಗೆ ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಲಾದಾಗ, ಅವರು ಹೇಳಿದರು: ಅವರ ಕಡೆಗೆ ಗಮನ ನೀಡಬೇಡಿ. ಅವರ ಮಾತುಗಳನ್ನು ಸ್ವೀಕರಿಸಬೇಡಿ. ಅವರಿಗೆ ಯಾವುದೇ ಪ್ರಾಮುಖ್ಯತೆಯಿಲ್ಲ. ಜನರು ಹೇಳಿದರು: ಆದರೆ ಕೆಲವೊಮ್ಮೆ ಅವರು ಹೇಳಿದ ಮಾತು ಸತ್ಯವಾಗುತ್ತದೆಯಲ್ಲವೇ. ಇಂತಿಂತಹ ತಿಂಗಳ ಇಂತಿಂತಹ ದಿನದಲ್ಲಿ ಇಂತಿಂತಹ ಘಟನೆ ಸಂಭವಿಸುತ್ತದೆಯೆಂದು ಅವರು ಹೇಳಿದರೆ ಅವರು ಹೇಳಿದಂತೆ ಅದು ಸಂಭವಿಸುತ್ತದೆಯಲ್ಲವೇ? ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ಜಿನ್ನ್ಗಳು (ಯಕ್ಷ) ಆಕಾಶದಲ್ಲಿ ನಡೆಯುವ ಸಂಗತಿಗಳನ್ನು ಕದ್ದಾಲಿಸುತ್ತಾರೆ. ನಂತರ ಅಲ್ಲಿಂದ ಇಳಿದು, ತಮ್ಮ ಗೆಳೆಯರಾದ ಜ್ಯೋತಿಷಿಗಳ ಬಳಿಗೆ ಬಂದು ತಾವು ಆಲಿಸಿದ್ದನ್ನು ಅವರಿಗೆ ತಿಳಿಸುತ್ತಾರೆ. ಆಕಾಶದಿಂದ ಕದ್ದು ಕೇಳಿದ ಈ ಸತ್ಯಕ್ಕೆ ಜ್ಯೋತಿಷಿಗಳು ನೂರು ಸುಳ್ಳುಗಳನ್ನು ಬೆರೆಸುತ್ತಾರೆ.