ಈ ಹದೀಸಿನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ದಾಸರ ಮೇಲಿರುವ ಅಲ್ಲಾಹನ ಹಕ್ಕನ್ನು ಮತ್ತು ಅಲ್ಲಾಹನ ಮೇಲಿರುವ ದಾಸರ ಹಕ್ಕನ್ನು ವಿವರಿಸುತ್ತಿದ್ದಾರೆ. ದಾಸರ ಮೇಲಿರುವ ಅಲ್ಲಾಹನ ಹಕ್ಕು ಏನೆಂದರೆ ಅವರು ಅವನನ್ನು ಮಾತ್ರ ಆರಾಧಿಸಬೇಕು ಮತ್ತು ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡಬಾರದು. ಅಲ್ಲಾಹನ ಮೇಲಿರುವ ದಾಸರ ಹಕ್ಕು ಏನೆಂದರೆ ಅವನೊಂದಿಗೆ ಏನನ್ನೂ ಸಹಭಾಗಿಯನ್ನಾಗಿ ಮಾಡದ ಏಕದೇವ ವಿಶ್ವಾಸಿಗಳನ್ನು ಅವನು ಶಿಕ್ಷಿಸಬಾರದು. ನಂತರ ಮುಆದ್ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಈ ಅನುಗ್ರಹದ ಬಗ್ಗೆ ಜನರು ಸಂತೋಷಪಡುವುದಕ್ಕಾಗಿ ನಾನು ಈ ಸಿಹಿ ಸುದ್ದಿಯನ್ನು ಅವರಿಗೆ ತಿಳಿಸಲೇ?" ಆದರೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರು ಅದರ ಮೇಲೆ ಅವಲಂಬಿತರಾಗುವರು ಎಂಬ ಭಯದಿಂದ ಅದನ್ನು ತಡೆದರು.