ಒಬ್ಬ ವ್ಯಕ್ತಿ ಪ್ರವಾದಿಯರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ಬಗ್ಗೆ, ಅಂದರೆ ಸ್ವರ್ಗ ಪ್ರವೇಶವನ್ನು ಕಡ್ಡಾಯಗೊಳಿಸುವ ಮತ್ತು ನರಕ ಪ್ರವೇಶವನ್ನು ಕಡ್ಡಾಯಗೊಳಿಸುವ ಎರಡು ವಿಷಯಗಳ ಬಗ್ಗೆ ಕೇಳುತ್ತಾರೆ: ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸುತ್ತಾರೆ: "ಸ್ವರ್ಗವನ್ನು ಕಡ್ಡಾಯಗೊಳಿಸುವ ವಿಷಯ ಯಾವುದೆಂದರೆ ಒಬ್ಬ ವ್ಯಕ್ತಿ ಅಲ್ಲಾಹನನ್ನು ಮಾತ್ರ ಆರಾಧಿಸುತ್ತಾ ಮತ್ತು ಅವನೊಡನೆ ಯಾವುದೇ ಸಹಭಾಗಿತ್ವ (ಶಿರ್ಕ್) ಮಾಡದೆ ಮರಣ ಹೊಂದುವುದು. ನರಕವನ್ನು ಕಡ್ಡಾಯಗೊಳಿಸುವ ವಿಷಯ ಯಾವುದೆಂದರೆ, ಅಲ್ಲಾಹನೊಡನೆ ಸಹಭಾಗಿತ್ವ ಮಾಡುತ್ತಾ, ಅವನ ಪ್ರಭುತ್ವದಲ್ಲಿ, ಆರಾಧನೆಯಲ್ಲಿ, ಮತ್ತು ಅವನ ಹೆಸರು ಮತ್ತು ಗುಣಲಕ್ಷಣಗಳಲ್ಲಿ ಅವನಿಗೆ ಸರಿಸಮಾನರನ್ನು ನಿಶ್ಚಯಿಸಿದ ಸ್ಥಿತಿಯಲ್ಲಿ ಮರಣಹೊಂದುವುದು.