ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಅಲ್ಲಾಹು ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸುವುದಕ್ಕೆ ಐವತ್ತು ಸಾವಿರ ವರ್ಷಗಳ ಮುಂಚೆ, ಸೃಷ್ಟಿಗಳ ಬದುಕು, ಸಾವು, ಆಹಾರ ಮುಂತಾದ ಅವರಿಗೆ ಸಂಬಂಧಿಸಿದ ಎಲ್ಲಾ ವಿಧಿ ನಿರ್ಣಯಗಳನ್ನು ಸವಿಸ್ತಾರವಾಗಿ ಸುರಕ್ಷಿತ ಫಲಕದಲ್ಲಿ ದಾಖಲಿಸಿದ್ದಾನೆ. ಸರ್ವಶಕ್ತನಾದ ಅಲ್ಲಾಹನ ತೀರ್ಮಾನದಂತೆಯೇ ಅವೆಲ್ಲವೂ ಸಂಭವಿಸುತ್ತವೆ. ಆದ್ದರಿಂದ, ಯಾವುದೇ ಒಂದು ವಿಷಯವು ಸಂಭವಿಸುವುದಾದರೂ ಅದು ಅಲ್ಲಾಹನ ತೀರ್ಮಾನ ಮತ್ತು ನಿರ್ಣಯದ ಪ್ರಕಾರವೇ ಸಂಭವಿಸುತ್ತದೆ. ಮನುಷ್ಯನಿಗೆ ಏನಾದರೂ ಕೆಡುಕು ಸಂಭವಿಸಿದರೆ, ಅದು ಅವನಿಗೆ ಸಂಭವಿಸದೆ ತಪ್ಪಿ ಹೋಗುವುದಾಗಿರಲಿಲ್ಲ. ಅದೇ ರೀತಿ, ಅವನಿಗೆ ಏನಾದರೂ ಕೆಡುಕು ಸಂಭವಿಸದೆ ತಪ್ಪಿ ಹೋದರೆ, ಅದು ಅವನಿಗೆ ಸಂಭವಿಸುವುದಾಗಿರಲಿಲ್ಲ.