ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ಕದರ್‌ನ ರಾತ್ರಿಯಲ್ಲಿ ನಮಾಝ್ ನಿರ್ವಹಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.” Sahih/Authentic. - Al-Bukhari and Muslim
explain-icon

ವಿವರಣೆ

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಕದರ್‌ನ ರಾತ್ರಿಯ ಶ್ರೇಷ್ಠತೆಯನ್ನು ತಿಳಿಸುತ್ತಾರೆ. ಅದು ರಮದಾನ್ ತಿಂಗಳ ಕೊನೆಯ ಹತ್ತರಲ್ಲಿ ಬರುತ್ತದೆ. ಯಾರು ಆ ರಾತ್ರಿಯಲ್ಲಿ ವಿಶ್ವಾಸವಿಟ್ಟು, ಅದರ ಶ್ರೇಷ್ಠತೆಯಲ್ಲಿ ನಂಬಿಕೆಯಿಟ್ಟು, ಯಾವುದೇ ತೋರಿಕೆ ಅಥವಾ ಪ್ರಶಂಸೆಯನ್ನು ಬಯಸದೆ ಕೇವಲ ಅಲ್ಲಾಹನ ಪ್ರತಿಫಲವನ್ನು ಮಾತ್ರ ಅಪೇಕ್ಷಿಸುತ್ತಾ, ಆ ರಾತ್ರಿಯಲ್ಲಿ ನಮಾಝ್, ಪ್ರಾರ್ಥನೆ, ಕುರ್‌ಆನ್ ಪಠಣ, ಅಲ್ಲಾಹನ ಸ್ಮರಣೆ, ಮುಂತಾದ ಆರಾಧನಾ ಕರ್ಮಗಳಲ್ಲಿ ಪರಿಶ್ರಮಿಸುತ್ತಾರೋ, ಅವರ ಹಿಂದಿನ ಪಾಪಗಳೆಲ್ಲವನ್ನೂ ಕ್ಷಮಿಸಲಾಗುತ್ತದೆ.

explain-icon

ಹದೀಸಿನ ಪ್ರಯೋಜನಗಳು

  • ಈ ಹದೀಸ್ ಕದ್ರ್‌ನ ರಾತ್ರಿಯ ಶ್ರೇಷ್ಠತೆಯನ್ನು ತಿಳಿಸುತ್ತದೆ ಮತ್ತು ಆ ರಾತ್ರಿಯಲ್ಲಿ ನಮಾಝ್ ನಿರ್ವಹಿಸುವುದನ್ನು ಪ್ರೋತ್ಸಾಹಿಸುತ್ತದೆ.
  • ಪ್ರಾಮಾಣಿಕವಾದ ಉದ್ದೇಶ (ನಿಯ್ಯತ್) ಇದ್ದರೆ ಮಾತ್ರ ಸತ್ಕರ್ಮಗಳು ಸ್ವೀಕಾರವಾಗುತ್ತದೆಯೆಂದು ಈ ಹದೀಸ್ ತಿಳಿಸುತ್ತದೆ.
  • ಅಲ್ಲಾಹನ ಅನುಗ್ರಹ ಮತ್ತು ದಯೆಯನ್ನು ಈ ಹದೀಸ್ ತಿಳಿಸುತ್ತದೆ. ಏಕೆಂದರೆ ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ಕದ್ರ್‌ನ ರಾತ್ರಿಯಲ್ಲಿ ನಮಾಝ್ ನಿರ್ವಹಿಸುವವರ ಹಿಂದಿನ ಪಾಪಗಳನ್ನು ಕ್ಷಮಿಸಲಾಗುತ್ತದೆ.
explain-icon

ವರ್ಗಗಳು

explain-icon

ಇನ್ನಷ್ಟು