ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ: "ಓ ಆದಮನ ಮಗನೇ! ಕಡ್ಡಾಯ ಮತ್ತು ಅಪೇಕ್ಷಣೀಯವಾದ ಎಲ್ಲಾ ಖರ್ಚುಗಳನ್ನು ಮಾಡು. ನೀನು ಖರ್ಚು ಮಾಡಿದರೆ ನಾನು ನಿನ್ನ ಜೀವನೋಪಾಯವನ್ನು ವಿಶಾಲಗೊಳಿಸುತ್ತೇನೆ. ನೀನು ಖರ್ಚು ಮಾಡಿದ್ದಕ್ಕೆ ಬದಲಿಯನ್ನು ನೀಡುತ್ತೇನೆ ಮತ್ತು ನಿನ್ನ ಆಸ್ತಿಯಲ್ಲಿ ಸಮೃದ್ಧಿಯನ್ನು ಹರಿಸುತ್ತೇನೆ.