ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ದುಲ್-ಹಿಜ್ಜ ತಿಂಗಳ ಮೊದಲ ಹತ್ತು ದಿನಗಳಲ್ಲಿ ಮಾಡುವ ಸತ್ಕರ್ಮಗಳು ವರ್ಷದ ಇತರ ದಿನಗಳಲ್ಲಿ ಮಾಡುವ ಸತ್ಕರ್ಮಗಳಿಗಿಂತಲೂ ಶ್ರೇಷ್ಠವಾಗಿದೆ. ಆಗ ಸಹಾಬಿಗಳು (ಸಂಗಡಿಗರು) (ಅವರೆಲ್ಲರ ಬಗ್ಗೆ ಅಲ್ಲಾಹು ಸಂಪ್ರೀತನಾಗಲಿ) ಇತರ ದಿನಗಳಲ್ಲಿ ಮಾಡುವ ಜಿಹಾದ್ನ ಬಗ್ಗೆ, ಅದು ಈ ದಿನಗಳಲ್ಲಿ ಮಾಡುವ ಸತ್ಕರ್ಮಗಳಿಗಿಂತಲೂ ಶ್ರೇಷ್ಠವಲ್ಲವೇ? ಎಂದು ಕೇಳಿದರು. ಏಕೆಂದರೆ ಅವರ ದೃಷ್ಟಿಕೋನದಲ್ಲಿ ಜಿಹಾದ್ ಅತಿ ಶ್ರೇಷ್ಠ ಸತ್ಕರ್ಮವಾಗಿತ್ತು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: ಇತರ ದಿನಗಳಲ್ಲಿ ಮಾಡುವ ಜಿಹಾದ್ಗಿಂತಲೂ ಈ ದಿನಗಳಲ್ಲಿ ಮಾಡುವ ಸತ್ಕರ್ಮಗಳು ಶ್ರೇಷ್ಠವಾಗಿವೆ. ಆದರೆ ಒಬ್ಬ ವ್ಯಕ್ತಿ ತನ್ನ ದೇಹ ಮತ್ತು ಆಸ್ತಿಯನ್ನು ಪಣವಾಗಿಟ್ಟು ಅಲ್ಲಾಹನ ಮಾರ್ಗದಲ್ಲಿ ಜಿಹಾದ್ ಮಾಡಲು ಹೊರಟು, ನಂತರ ಅಲ್ಲಾಹನ ಮಾರ್ಗದಲ್ಲಿ ತನ್ನ ಆಸ್ತಿಯನ್ನು ಹಾಗೂ ಆತ್ಮವನ್ನು ಕಳಕೊಳ್ಳುವುದರ ಹೊರತು. ಇದು ಈ ಶ್ರೇಷ್ಠ ದಿನಗಳಲ್ಲಿ ಮಾಡುವ ಸತ್ಕರ್ಮಗಳಿಗಿಂತಲೂ ಹೆಚ್ಚು ಶ್ರೇಷ್ಠವಾಗಿದೆ.