ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ವುದೂವಿನ ಐಚ್ಛಿಕ ಕಾರ್ಯಗಳು ಮತ್ತು ಶಿಷ್ಟಾಚಾರಗಳನ್ನು ಸರಿಯಾಗಿ ಪಾಲಿಸುತ್ತಾ ಯಾರು ವುದೂ ನಿರ್ವಹಿಸುತ್ತಾರೋ, ಅದು ಅವರ ಪಾಪಗಳು ಪರಿಹಾರವಾಗಲು ಮತ್ತು ದೋಷಗಳು ನಿವಾರಣೆಯಾಗಲು ಕಾರಣವಾಗುತ್ತದೆ. ಎಲ್ಲಿಯವರೆಗೆಂದರೆ, ಅವರ ಕೈಗಳ ಮತ್ತು ಪಾದಗಳ ಉಗುರುಗಳ ಅಡಿಭಾಗದಿಂದಲೂ ಪಾಪಗಳು ನಿವಾರಣೆಯಾಗುತ್ತವೆ.