ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ಎರಡು ವಿಷಯಗಳನ್ನು ತಿಳಿಸುತ್ತಿದ್ದಾರೆ. ಮುಸಲ್ಮಾನನು ಅವೆರಡನ್ನು ಸರಿಯಾಗಿ ಉಪಯೋಗಿಸಿದರೆ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ. ಮೊದಲನೆಯದು: ಸರ್ವಶಕ್ತನಾದ ಅಲ್ಲಾಹು ಕೋಪಗೊಳ್ಳುವಂತಹ ಮಾತುಗಳನ್ನು ಆಡದಂತೆ ನಾಲಿಗೆಯನ್ನು ಹದ್ದುಬಸ್ತಿನಲ್ಲಿಡುವುದು. ಎರಡನೆಯದು: ಅಶ್ಲೀಲ ಕೃತ್ಯಗಳಲ್ಲಿ ತೊಡಗದಂತೆ ಗುಪ್ತಾಂಗವನ್ನು ಹದ್ದುಬಸ್ತಿನಲ್ಲಿಡುವುದು. ಏಕೆಂದರೆ, ಪಾಪಗಳು ಹೆಚ್ಚಾಗಿ ಈ ಎರಡು ಅಂಗಗಳಿಂದಲೇ ಸಂಭವಿಸುತ್ತವೆ.