ಜನರೊಡನೆ ಸಾಲ ವ್ಯವಹಾರ ಮಾಡುತ್ತಿದ್ದ, ಅಥವಾ ಅವರಿಗೆ ಸಮಯಾವಕಾಶ ನೀಡಿ ಮಾರಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯ ಬಗ್ಗೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುತ್ತಾರೆ. ಜನರಿಂದ ಬರಬೇಕಾದ ಸಾಲದ ಹಣವನ್ನು ಸಂಗ್ರಹ ಮಾಡುತ್ತಿದ್ದ ತನ್ನ ಸೇವಕನೊಂದಿಗೆ ಆತ ಹೇಳುತ್ತಿದ್ದ: ಸಾಲ ಮರುಪಾವತಿ ಮಾಡಲು ಸಾಮರ್ಥ್ಯವಿಲ್ಲದ ವ್ಯಕ್ತಿಯ ಬಳಿಗೆ ಹೋದರೆ ಆತನನ್ನು ಕಡೆಗಣಿಸು. ಅಂದರೆ ಒಂದೋ ಆತನಿಗೆ ಸ್ವಲ್ಪ ಸಮಯಾವಕಾಶ ನೀಡು; ಆತನನ್ನು ಸತಾಯಿಸಬೇಡ. ಅಥವಾ ಅವನ ಬಳಿ ಏನು ಇದೆಯೋ ಅದನ್ನು ಪಡೆದುಕೋ, ಅದು ಕಡಿಮೆಯಾದರೂ ತೊಂದರೆ ಇಲ್ಲ. ಅಲ್ಲಾಹು ತನ್ನ ಪಾಪಗಳನ್ನು ಮನ್ನಿಸಬೇಕು ಮತ್ತು ಕಡೆಗಣಿಸಬೇಕು ಎಂಬ ಆಸೆ ಮತ್ತು ನಿರೀಕ್ಷೆಯಿಂದಲೇ ಆತ ಹೀಗೆ ಮಾಡುತ್ತಿದ್ದ. ಆದ್ದರಿಂದ, ಆತ ಮರಣ ಹೊಂದಿದಾಗ ಅಲ್ಲಾಹು ಆತನ ಪಾಪಗಳನ್ನು ಮನ್ನಿಸಿ ಕಡೆಗಣಿಸಿದನು.