ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಒಬ್ಬರು ಇನ್ನೊಬ್ಬರನ್ನು ಕೊಲ್ಲಬೇಕೆಂಬ ಉದ್ದೇಶದಿಂದ ಪರಸ್ಪರ ಎದುರಾದರೆ, ಕೊಲೆಗಾರನು ಕೊಲೆ ಮಾಡಿದ ಕಾರಣಕ್ಕಾಗಿ ನರಕವಾಸಿಯಾಗುತ್ತಾನೆ. ಆದರೆ ಕೊಲೆಯಾದವನು ಏಕೆ ನರಕವಾಸಿಯಾಗುತ್ತಾನೆಂಬ ವಿಷಯದಲ್ಲಿ ಸಂಗಡಿಗರಿಗೆ (ಸಹಾಬಾಗಳಿಗೆ) ಸಂಶಯವಾಯಿತು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸಿದರು: ಅವನು ನರಕಕ್ಕೆ ಹೋಗುವುದೇಕೆಂದರೆ, ಅವನು ಕೂಡ ತನ್ನ ಎದುರಾಳಿಯನ್ನು ಕೊಲ್ಲಬೇಕೆಂಬ ಅತೀವ ಉತ್ಸಾಹವನ್ನು ಹೊಂದಿದ್ದ. ಆದರೆ ಎದುರಾಳಿಯೇ ಮೊದಲು ಖಡ್ಗ ಬೀಸಿದ್ದರಿಂದ ಅವನು ಮೊದಲು ಸತ್ತುಹೋದ.