ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಮುಸಲ್ಮಾನರ ಹಣದಲ್ಲಿ ಲಂಗುಲಗಾಮಿಲ್ಲದೆ ವ್ಯವಹರಿಸುವವರು ಮತ್ತು ಅನ್ಯಾಯವಾಗಿ ತಿನ್ನುವವರ ಬಗ್ಗೆ ತಿಳಿಸುತ್ತಾರೆ. ಅನುಚಿತ ಮೂಲಗಳಿಂದ ಸಂಗ್ರಹಿಸುವ ಮತ್ತು ಸಂಪಾದಿಸುವ, ಅನುಚಿತ ವಿಷಯಗಳಿಗಾಗಿ ಖರ್ಚು ಮಾಡುವ ಹಣಗಳೆಲ್ಲವೂ ಇದರ ವ್ಯಾಪ್ತಿಯಲ್ಲಿ ಬರುತ್ತದೆ. ಅನಾಥರ ಆಸ್ತಿಯನ್ನು ತಿನ್ನುವುದು, ವಕ್ಫ್ ಆಸ್ತಿಯನ್ನು ಕಬಳಿಸುವುದು, ವಿಶ್ವಾಸದಿಂದ ಒಪ್ಪಿಸಲಾದ ವಸ್ತುಗಳನ್ನು ಹಿಂದಿರುಗಿಸದಿರುವುದು, ಸಾರ್ವಜನಿಕ ಆಸ್ತಿಯನ್ನು ಅನರ್ಹ ವಿಧಾನಗಳ ಮೂಲಕ ವಶಪಡಿಸುವುದು ಎಲ್ಲವೂ ಇದರಲ್ಲಿ ಒಳಪಡುತ್ತವೆ. ನಂತರ, ಪುನರುತ್ಥಾನ ದಿನದಂದು ಅದಕ್ಕೆ ಪ್ರತಿಫಲವಾಗಿ ಅವರನ್ನು ನರಕಕ್ಕೆ ತಳ್ಳಲಾಗುತ್ತದೆ ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುತ್ತಾರೆ.