ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ತನ್ನ ಮುಸಲ್ಮಾನ ಸಹೋದರನ ಬಗ್ಗೆ ಯಾರಾದರೂ ದೂಷಣೆ ಮಾಡುವುದನ್ನು ಕೇಳುವಾಗ, ಆ ದೂಷಣೆಯನ್ನು ಅಥವಾ ಕೆಟ್ಟ ಮಾತುಗಳನ್ನು ತಡೆಯುವ ಮೂಲಕ ಯಾರು ಅವನ ಘನತೆಯನ್ನು ಕಾಪಾಡುತ್ತಾನೋ, ಅವನನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದ ಶಿಕ್ಷೆಯಿಂದ ಕಾಪಾಡುತ್ತಾನೆ.