ಜನರಿಗೆ ವಿಷಯಗಳನ್ನು ಹಗುರಗೊಳಿಸಬೇಕು ಮತ್ತು ಸುಲಭಗೊಳಿಸಬೇಕು; ಇಹಲೋಕ ಮತ್ತು ಪರಲೋಕಕ್ಕೆ ಸಂಬಂಧಿಸಿದ ಯಾವುದೇ ವಿಷಯವನ್ನೂ ಅವರಿಗೆ ಕಷ್ಟಗೊಳಿಸಬಾರದೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಆದೇಶಿಸುತ್ತಿದ್ದಾರೆ. ಆದರೆ ಹೀಗೆ ಮಾಡುವುದು ಅಲ್ಲಾಹು ಅನುಮತಿಸಿದ ಮತ್ತು ಅವನ ನಿಯಮಗಳ ಚೌಕಟ್ಟಿನಲ್ಲಿರಬೇಕಾಗಿದೆ. ಜನರಿಗೆ ಒಳಿತಿನ ಬಗ್ಗೆ ಸಿಹಿ ಸುದ್ದಿ ನೀಡಬೇಕು ಮತ್ತು ಅವರನ್ನು ಗಾಬರಿಗೊಳಿಸಿ ಒಳಿತಿನಿಂದ ದೂರವಾಗುವಂತೆ ಮಾಡಬಾರದು ಎಂದು ಅವರು ಇಲ್ಲಿ ಒತ್ತಾಯಿಸುತ್ತಿದ್ದಾರೆ.