ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಸರ್ವಶಕ್ತನಾದ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ನಮ್ಮ ಮೇಲೆ ಕಡ್ಡಾಯಗೊಳಿಸಿದ್ದಾನೆ. ಉತ್ತಮವಾಗಿ ವರ್ತಿಸುವುದು ಎಂದರೆ, ಆರಾಧನೆ ಮಾಡುವಾಗ, ಜನರಿಗೆ ಒಳಿತು ಮಾಡುವಾಗ ಮತ್ತು ಜನರಿಗೆ ತೊಂದರೆಯಾಗುವುದನ್ನೂ ತಡೆಗಟ್ಟುವಾಗ ಸದಾ ಅಲ್ಲಾಹನ ಬಗ್ಗೆ ಪ್ರಜ್ಞೆಯನ್ನು ಹೊಂದಿರುವುದು. ಈ ಉತ್ತಮ ವರ್ತನೆಯು ಪ್ರಾಣಿಗಳನ್ನು ಕೊಯ್ಯುವಾಗಲೂ ಇರಬೇಕು. ಪ್ರತೀಕಾರಕ್ಕಾಗಿ ಕೊಲ್ಲುವಾಗ, ಹೆಚ್ಚು ನರಳದೆ ಅತ್ಯಂತ ಸುಲಭವಾಗಿ ಮತ್ತು ವೇಗವಾಗಿ ಜೀವ ಹೋಗುವ ವಿಧಾನವನ್ನು ಆರಿಸುವುದು ಉತ್ತಮ ವರ್ತನೆಯಾಗಿದೆ. ಪ್ರಾಣಿಯ ಮೇಲಿರುವ ಸಹಾನುಭೂತಿಯಿಂದ ಚೂರಿಯನ್ನು ಹರಿತಗೊಳಿಸುವುದು, ಪ್ರಾಣಿಗೆ ಕಾಣುವ ರೀತಿಯಲ್ಲಿ ಚೂರಿಯನ್ನು ಹರಿತಗೊಳಿಸದಿರುವುದು ಮತ್ತು ಇತರ ಪ್ರಾಣಿಗಳು ಕಾಣುವ ರೀತಿಯಲ್ಲಿ ಅದನ್ನು ಕೊಯ್ಯದಿರುವುದು ಪ್ರಾಣಿಗಳನ್ನು ಕೊಯ್ಯುವಾಗ ತೋರಬೇಕಾದ ಉತ್ತಮ ವರ್ತನೆಗಳಾಗಿವೆ.