ಶೈತಾನನು ಸತ್ಯವಿಶ್ವಾಸಿಯ ಮನಸ್ಸಿನಲ್ಲಿ ಪಿಸುಗುಡುವ ಇಂತಹ ಪ್ರಶ್ನೆಗಳಿಗೆ ಔಷಧಿಯನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಹದೀಸಿನಲ್ಲಿ ತಿಳಿಸುತ್ತಿದ್ದಾರೆ ಶೈತಾನನು ಕೇಳುತ್ತಾನೆ: "ಇದನ್ನು ಸೃಷ್ಟಿಸಿದ್ದು ಯಾರು? ಇದನ್ನು ಸೃಷ್ಟಿಸಿದ್ದು ಯಾರು? ಆಕಾಶವನ್ನು ಸೃಷ್ಟಿಸಿದ್ದು ಯಾರು? ಭೂಮಿಯನ್ನು ಸೃಷ್ಟಿಸಿದ್ದು ಯಾರು?" ಆಗ ಸತ್ಯವಿಶ್ವಾಸಿಯು ಧಾರ್ಮಿಕ, ನೈಸರ್ಗಿಕ, ಮತ್ತು ಬೌದ್ಧಿಕ ಆಧಾರದಲ್ಲಿ "ಅಲ್ಲಾಹು" ಎಂದು ಉತ್ತರಿಸುತ್ತಾನೆ. ಆದರೆ ಶೈತಾನನು ತನ್ನ ದುರ್ಭೋದನೆಗಳನ್ನು ಅಲ್ಲಿಗೆ ನಿಲ್ಲಿಸುವುದಿಲ್ಲ. ಬದಲಿಗೆ ಮುಂದುವರಿಯುತ್ತಾ ಕೇಳುತ್ತಾನೆ: "ಅಲ್ಲಾಹನನ್ನು ಸೃಷ್ಟಿಸಿದ್ದು ಯಾರು?" ಆಗ ಸತ್ಯವಿಶ್ವಾಸಿಯು ಮೂರು ರೀತಿಗಳಲ್ಲಿ ಈ ದುರ್ಭೋದನೆಯನ್ನು ತಡೆಗಟ್ಟಬೇಕು: ಅಲ್ಲಾಹನಲ್ಲಿರುವ ವಿಶ್ವಾಸದಿಂದ. ಅಲ್ಲಾಹನಲ್ಲಿ ಶೈತಾನನಿಂದ ಅಭಯ ಕೋರುವ ಮೂಲಕ. ದುರ್ಬೋಧನೆಯೊಂದಿಗೆ ಮುಂದುವರಿಯುವುದನ್ನು ನಿಲ್ಲುವ ಮೂಲಕ.