ಕತಾದ (ಅಲ್ಲಾಹು ಅವರಿಗೆ ಕರುಣೆ ತೋರಲಿ) ರಿಂದ ವರದಿ. ಅವರು ಹೇಳಿದರು: ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನಮಗೆ ತಿಳಿಸಿದರು: ಒಬ್ಬ ವ್ಯಕ್ತಿ ಕೇಳಿದರು: "ಓ ಅಲ್ಲಾಹನ ಪ್ರವಾದಿಯವರೇ! ಸತ್ಯನಿಷೇಧಿಯನ್ನು ಅವನ ಮುಖದ ಮೇಲೆ ಒಟ್ಟುಗೂಡಿಸುವುದು ಹೇಗೆ?" ಅವರು ಉತ್ತರಿಸಿದರು: "ಇಹಲೋಕದಲ್ಲಿ ಅವನನ್ನು ಅವನ ಕಾಲುಗಳ ಮೇಲೆ ನಡೆಯುವಂತೆ ಮಾಡಿದವನಿಗೆ ಪುನರುತ್ಥಾನ ದಿನದಂದು ಅವನನ್ನು ಅವನ ಮುಖದ ಮೇಲೆ ನಡೆಯುವಂತೆ ಮಾಡುವ ಸಾಮರ್ಥ್ಯವಿಲ್ಲವೇ?" ಕತಾದ ಹೇಳುತ್ತಾರೆ: "ಖಂಡಿತ ಸಾಮರ್ಥ್ಯವಿದೆ. ನಮ್ಮ ಪರಿಪಾಲಕನ (ಅಲ್ಲಾಹನ) ಪ್ರತಿಷ್ಠೆಯ ಮೇಲಾಣೆ!" Sahih/Authentic. - Al-Bukhari and Muslim
explain-icon

ವಿವರಣೆ

ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಲಾಯಿತು: "ಪುನರುತ್ಥಾನ ದಿನದಂದು ಸತ್ಯನಿಷೇಧಿಯನ್ನು ಅವನ ಮುಖದ ಮೇಲೆ ಒಟ್ಟುಗೂಡಿಸುವುದು ಹೇಗೆ?" ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಇಹಲೋಕದಲ್ಲಿ ಅವನನ್ನು ಅವನ ಕಾಲುಗಳ ಮೇಲೆ ನಡೆಯುವಂತೆ ಮಾಡಿದವನಿಗೆ ಪುನರುತ್ಥಾನ ದಿನದಂದು ಅವನನ್ನು ಅವನ ಮುಖದ ಮೇಲೆ ನಡೆಯುವಂತೆ ಮಾಡುವ ಸಾಮರ್ಥ್ಯವಿಲ್ಲವೇ?" ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.

explain-icon

ಹದೀಸಿನ ಪ್ರಯೋಜನಗಳು

  • ಪುನರುತ್ಥಾನ ದಿನದಂದು ಸತ್ಯ ನಿಷೇಧಿಗೆ ಉಂಟಾಗುವ ಅಪಮಾನವನ್ನು ಮತ್ತು ಅವನು ಮುಖದ ಮೇಲೆ ನಡೆಯುವನು ಎಂದು ಈ ಹದೀಸ್ ತಿಳಿಸುತ್ತದೆ.
explain-icon

ವರ್ಗಗಳು

explain-icon

ಇನ್ನಷ್ಟು