ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಲಾಯಿತು: "ಪುನರುತ್ಥಾನ ದಿನದಂದು ಸತ್ಯನಿಷೇಧಿಯನ್ನು ಅವನ ಮುಖದ ಮೇಲೆ ಒಟ್ಟುಗೂಡಿಸುವುದು ಹೇಗೆ?" ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಇಹಲೋಕದಲ್ಲಿ ಅವನನ್ನು ಅವನ ಕಾಲುಗಳ ಮೇಲೆ ನಡೆಯುವಂತೆ ಮಾಡಿದವನಿಗೆ ಪುನರುತ್ಥಾನ ದಿನದಂದು ಅವನನ್ನು ಅವನ ಮುಖದ ಮೇಲೆ ನಡೆಯುವಂತೆ ಮಾಡುವ ಸಾಮರ್ಥ್ಯವಿಲ್ಲವೇ?" ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.