ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಪುನರುತ್ಥಾನ ದಿನ ಅವರಿಗೆ ಒಂದು ಕೊಳ (ಹೌದ್) ಇರಲಿದೆ. ಅದರ ಉದ್ದ ಮತ್ತು ಅಗಲ ಒಂದು ತಿಂಗಳ ಪ್ರಯಾಣದಷ್ಟಿದೆ. ಅದರ ನೀರು ಹಾಲಿಗಿಂತಲೂ ಹೆಚ್ಚು ಬೆಳ್ಳಗಿದೆ. ಅದರ ಪರಿಮಳವು ಕಸ್ತೂರಿಯ ಪರಿಮಳಕ್ಕಿಂತಲೂ ಉತ್ತಮ ಮತ್ತು ಆಹ್ಲಾದಕರವಾಗಿದೆ. ಅದರ ಲೋಟಗಳು ಆಕಾಶದಲ್ಲಿರುವ ನಕ್ಷತ್ರಗಳ ಸಂಖ್ಯೆಯಷ್ಟಿವೆ. ಆ ಲೋಟಗಳ ಮೂಲಕ ಆ ಕೊಳದ ನೀರನ್ನು ಕುಡಿಯುವವರಿಗೆ ಮತ್ತೆ ಎಂದಿಗೂ ದಾಹವಾಗುವುದಿಲ್ಲ.