ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಪುನರುತ್ಥಾನ ದಿನದಂದು ಅವರು ಅವರ ಕೊಳದ ಬಳಿಯಿದ್ದು ಅವರ ಸಮುದಾಯದಲ್ಲಿ ಸೇರಿದವರು ಅಲ್ಲಿಗೆ ಬರುವುದನ್ನು ನೋಡುತ್ತಾ ಇರುತ್ತಾರೆ. ಅವರ ಸಮೀಪಕ್ಕೆ ಬಂದ ಕೆಲವು ಜನರನ್ನು ತಡೆಯಲಾಗುತ್ತದೆ. ಆಗ ಅವರು ಹೇಳುತ್ತಾರೆ: "ಓ ನನ್ನ ಪರಿಪಾಲಕನೇ! ಅವರು ನನ್ನವರು ಮತ್ತು ನನ್ನ ಸಮುದಾಯದವರು." ಆಗ ಅವರೊಡನೆ ಹೀಗೆ ಹೇಳಲಾಗುತ್ತದೆ: "ತಾವು ಇಹಲೋಕಕ್ಕೆ ವಿದಾಯ ಕೋರಿದ ನಂತರ ಅವರು ಏನು ಮಾಡಿದರೆಂದು ನಿಮಗೆ ಗೊತ್ತಿದೆಯೇ? ಅಲ್ಲಾಹನಾಣೆ! ಅವರು ತಮ್ಮ ಹಿಮ್ಮಡಿಗಳಲ್ಲಿ ಮರಳಿ ಧರ್ಮದಿಂದ ಹಿಂದೆ ಸರಿದರು. ಆದ್ದರಿಂದ ಅವರು ನಿಮ್ಮವರಲ್ಲ ಮತ್ತು ನಿಮ್ಮ ಸಮುದಾಯದವರೂ ಅಲ್ಲ."