ಚಿಕ್ಕಪ್ಪ ಸಾವಿನ ಅಂಚಿನಲ್ಲಿದ್ದಾಗ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರೊಡನೆ "ಲಾಇಲಾಹ ಇಲ್ಲಲ್ಲಾಹ್" (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ) ಎಂದು ಹೇಳುವಂತೆ ಬೇಡಿಕೊಳ್ಳುತ್ತಾರೆ. ಅವರು ಅದನ್ನು ಹೇಳಿದರೆ, ಅದನ್ನು ಹಿಡಿದು ಪುನರುತ್ಥಾನ ದಿನದಂದು ನಾನು ತಮಗೆ ಶಿಫಾರಸು ಮಾಡುವೆನು ಮತ್ತು ತಾವು ಇಸ್ಲಾಂ ಸ್ವೀಕರಿಸಿದ್ದೀರಿ ಎಂದು ಸಾಕ್ಷಿ ನುಡಿಯುವೆನು ಎಂದು ಅವರು ಹೇಳುತ್ತಾರೆ. ಆದರೆ ಅಬೂತಾಲಿಬ್ ಸಾಕ್ಷಿವಚನಗಳನ್ನು ಉಚ್ಛರಿಸಲು ಅಸಮ್ಮತಿ ಸೂಚಿಸಿದರು. ಏಕೆಂದರೆ, ಅವರಿಗೆ ಕುರೈಷರು ಅವರನ್ನು ಆಕ್ಷೇಪಿಸುತ್ತಾ ಸಾವಿನ ಭಯದಿಂದ ಬಲಹೀನನಾಗಿ ಈತ ಅದನ್ನು ಹೇಳಿದ್ದಾನೆಂದು ಹೇಳುವರು ಎಂಬ ಭಯವಿತ್ತು. ಆದ್ದರಿಂದ ಅವರು ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಆ ಭಯವಿಲ್ಲದಿರುತ್ತಿದ್ದರೆ ನಾನು ಸಾಕ್ಷಿವಚನಗಳನ್ನು ಉಚ್ಛರಿಸಿ ನಿನಗೆ ಸಂತೋಷ ಉಂಟಾಗುವಂತೆ ಮಾಡುತ್ತಿದ್ದೆ ಮತ್ತು ನಿನ್ನ ಆಸೆಯನ್ನು ನೆರವೇರಿಸುತ್ತಿದ್ದೆ." ಆಗ ಸರ್ವಶಕ್ತನಾದ ಅಲ್ಲಾಹು ಈ ಆಯತ್ತನ್ನು ಅವತೀರ್ಣಗೊಳಿಸಿ, ಹೃದಯವನ್ನು ಪರಿವರ್ತಿಸಿ ಇಸ್ಲಾಂ ಸ್ವೀಕರಿಸುವಂತೆ ಮಾರ್ಗದರ್ಶನ ಮಾಡುವ ಶಕ್ತಿ ಪ್ರವಾದಿಯವರಿಗಿಲ್ಲ; ಅದು ಅಲ್ಲಾಹನಿಗೆ ಮಾತ್ರ ಇರುವ ಶಕ್ತಿಯಾಗಿದ್ದು, ಅವನು ಬಯಸಿದವರಿಗೆ ಅವನು ಆ ಮಾರ್ಗದರ್ಶನವನ್ನು ನೀಡುತ್ತಾನೆ; ಪ್ರವಾದಿಯವರಿಗೆ ಇರುವುದು ಕೇವಲ ಪುರಾವೆ, ವಿವರಣೆ ಮತ್ತು ನಿರ್ದೇಶನಗಳ ಮೂಲಕ ಸನ್ಮಾರ್ಗವನ್ನು ತೋರಿಸುವ ಹಾಗೂ ನೇರವಾದ ಮಾರ್ಗಕ್ಕೆ ಆಮಂತ್ರಿಸುವ ಅಧಿಕಾರ ಮಾತ್ರವಾಗಿದೆ ಎಂದು ಹೇಳುತ್ತಾನೆ.