ವಿದ್ವಾಂಸರ ನಡುವೆ ನಾನು ಕೂಡ ನಿಮ್ಮಂತೆ ಒಬ್ಬ ವಿದ್ವಾಂಸ ಎಂದು ತೋರಿಸುವುದಕ್ಕಾಗಿ ಮತ್ತು ಜಂಬಪಡುವುದಕ್ಕಾಗಿ, ಅಥವಾ ಅವಿವೇಕಿಗಳೊಡನೆ ಮತ್ತು ಅಜ್ಞಾನಿಗಳೊಡನೆ ಸಂಭಾಷಣೆ ಮಾಡಿ ತರ್ಕಿಸುವುದಕ್ಕಾಗಿ, ಅಥವಾ ಸಭೆಗಳಲ್ಲಿ ಗೌರವ ಸ್ಥಾನವನ್ನು ಮತ್ತು ಪ್ರಥಮ ಆದ್ಯತೆಯನ್ನು ಪಡೆಯುವುದಕ್ಕಾಗಿ ಜ್ಞಾನ ಸಂಪಾದಿಸಬಾರದು ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಎಚ್ಚರಿಸುತ್ತಿದ್ದಾರೆ. ಯಾರು ಈ ಉದ್ದೇಶಗಳಿಗಾಗಿ ಜ್ಞಾನವನ್ನು ಕಲಿಯುತ್ತಾರೋ, ಅವರು ನರಕಕ್ಕೆ ಅರ್ಹರಾಗುತ್ತಾರೆ. ಏಕೆಂದರೆ, ಅವರು ಜ್ಞಾನ ಕಲಿತದ್ದು (ಅಲ್ಲಾಹನ ಸಂಪ್ರೀತಿಗಲ್ಲ; ಬದಲಿಗೆ) ತೋರಿಕೆಗಾಗಿದೆ. ಜ್ಞಾನ ಕಲಿಯುವುದರಲ್ಲಿ ಅವರಿಗೆ ಯಾವುದೇ ನಿಷ್ಕಳಂಕತೆಯಿಲ್ಲ.